ಆ.1ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ- ಉಡುಪಿ ಜಿಲ್ಲಾ ಪ್ರವಾಸ

ಉಡುಪಿ: ಅಧಿಕಾರಿ ಸ್ವೀಕರಿಸಿದ ಬಳಿಕ ಮೊದಲ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಆಗಸ್ಟ್ 1ರಂದು ಪೂರ್ವಾಹ್ನ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳುವರು.‌ 12:30ಕ್ಕೆ ಉಡುಪಿ ಜಿಪಂ ಸಭಾಂಗಣದಲ್ಲಿ ‌ಪ್ರಗತಿ ಪರಿಶೀಲನೆ ನಡೆಸುವರು. ಸಂಜೆ 4:15ಕ್ಕೆ ದ.ಕ.ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ದ.ಕ.ಜಿಪಂ ಸಭಾಂಗಣದಲ್ಲಿ ನಡೆಸುವರು. ರಾತ್ರಿ 9:50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!