ಮಣಿಪಾಲ: ಕೆಎಂಸಿಯ ಖ್ಯಾತ ಮೂತ್ರಶಾಸ್ತ್ರಜ್ಞ ಡಾ. ವೇಣೋಗೋಪಾಲ್ ನಿಧನ

ಉಡುಪಿ: ಖ್ಯಾತ ಮೂತ್ರಶಾಸ್ತ್ರಜ್ಞ ಮತ್ತು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ.ವೇಣೋಗೋಪಾಲ್(83) ಇಂದು ನಿಧನರಾದರು.

ಇವರು ಪ್ರಸ್ತುತ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರುವ ಡಾ.ಆನಂದ್ ವೇಣುಗೋಪಾಲ್ ಅವರ ತಂದೆ.

ಕಸ್ತೂರ್ಬಾ ಆಸ್ಪತ್ರೆ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರ ವಿಭಾಗಕ್ಕೆ ಸುಧೀರ್ಘ ಸೇವೆಯು ಮತ್ತು ಅವರು ವಿಭಾಗಕ್ಕೆ ನೀಡಿದ ಕೊಡುಗೆ ಮರೆಯಲಾಗದು. ಅವರ ಜ್ಞಾನವು ಈಗ ದೇಶ ಮತ್ತು ವಿದೇಶಗಳ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂತ್ರಶಾಸ್ತ್ರಜ್ಞರ ಮೂಲಕ ಪಸರಿಸಿದೆ.

Leave a Reply

Your email address will not be published. Required fields are marked *

error: Content is protected !!