ಉಡುಪಿ: ಆ.2ರಂದು ಮಣಿಪುರ ಘಟನೆ ಖಂಡಿಸಿ ಕಾಲ್ನಡಿಗೆ ಜಾಥ – ಪ್ರತಿಭಟನಾ ಸಭೆ

ಉಡುಪಿ: ಮಣಿಪುರದಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಾನ ಮನಸ್ಕರ ವೇದಿಕೆಯಿಂದ ಇದೇ ಆಗಸ್ಟ್ 2ರಂದು ಕಾಲ್ನಡಿಗೆ ಜಾಥ ಹಾಗೂ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾನ ಮನಸ್ಕರ ವೇದಿಕೆಯ ಸಂಚಾಲಕ ಪ್ರಶಾಂತ ಜತ್ತನ್ನ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲ್ನಡಿಗೆ ಜಾಥವು ಆ.2ರ ಮಧ್ಯಾಹ್ನ 2 ಗಂಟೆಗೆ ನಗರದ ಶೋಕಮಾತಾ ಇಗರ್ಜಿ ಆವರಣದಿಂದ ಪ್ರಾರಂಭಗೊಳ್ಳಲಿದ್ದು, ಸರ್ವಿಸ್ ಬಸ್ ನಿಲ್ದಾಣ, ಕೆಎಂ ಮಾರ್ಗ, ಕೋರ್ಟ್ ರೋಡ್ ಮೂಲಕ ಸಾಗಿ ಮಿಷನ್ ಕಾಂಪೌಂಡ್‌ನಲ್ಲಿ ಮುಕ್ತಾಯ ಗೊಳ್ಳಲಿದೆ ಎಂದರು.

ಸಂಜೆ 4 ಗಂಟೆಗೆ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು, ಪ್ರತಿಭಟನಾ ಸಭೆಯಲ್ಲಿ ಸುಮಾರು 7 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

Leave a Reply

Your email address will not be published. Required fields are marked *

error: Content is protected !!