ಪೆರಂಪಳ್ಳಿ: ರಾತ್ರೋರಾತ್ರಿ ಮುಂಬೈನಿಂದ ಬಂದು ಹೊಟೇಲ್ ಉದ್ಯೋಗಿ ಆತ್ಮಹತ್ಯೆ

ಉಡುಪಿ: ಮುಂಬೈ ಹೊಟೇಲ್ ಉದ್ಯೋಗಿಯೊಬ್ಬರು ರಾತ್ರೋರಾತ್ರಿ ಮನೆಗೆ ಆಗಮಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.7ರಂದು ಅಂಬಾಗಿಲು ಪೆರಂಪಳ್ಳಿ ಕಕ್ಕುಂಜೆ ದೇವಿನಗರ ಎಂಬಲ್ಲಿ ನಡೆದಿದೆ.

ಮೃತರನ್ನು ದೇವಿನಗರದ ಸುಕೇಶ್ ಶೆಟ್ಟಿ (51) ವರ್ಷ ಎಂದು ಗುರುತಿಸಲಾಗಿದೆ. ರಾತ್ರಿ ಹೊತ್ತಿನಲ್ಲಿ ಮುಂಬೈಯಿಂದ ಆಗಮಿಸಿ, ಮನೆಯ ಹೊರಗಡೆ ಇರುವ ಬಟ್ಟೆ ಒಗೆಯುವ ಸ್ಥಳದಲ್ಲಿ ಕಬ್ಬಿಣದ ಪೈಪಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಮಣಿಪಾಲ ಶವಾಗಾರಕ್ಕೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!