ಮಂಗಳೂರು: ಹೊಟೇಲ್ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ ಪತ್ತೆ
ಮಂಗಳೂರು, ಸೆ 11: ನಗರದ ಪ್ರತಿಷ್ಠಿತ ಖಾಸಗಿ ಹೊಟೇಲ್ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಮೃತಪಟ್ಟ ಅಧಿಕಾರಿ. ಬ್ಯಾಂಕ್ ಅಧಿಕಾರಿ ಭಾನುವಾರ ಮಂಗಳೂರಿಗೆ ಆಗಮಿಸಿ ಹೊಟೇಲ್ನಲ್ಲಿ ತಂಗಿದ್ದು, ಇಂದು ಬೆಳಿಗ್ಗೆ 4 ಗಂಟೆಗೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು ಎನ್ನಲಾಗಿದೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.