ಶ್ರೀಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಲು ಡಾ.ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಉಡುಪಿ: ಶ್ರೀಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯ ಶ್ರಿಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮಾಧಿಕಾರಿ ಡಾ. ರಾಜರ್ಷಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆದೇಶದಂತೆ ತಮ್ಮ ಚತುರ್ಥ ಪರ್ಯಾಯದ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರ ಸ್ಥಾನವನ್ನು ಅಲಂಕರಿಸುವಂತೆ ಹಾಗೂ ಇದೆ ಸೆ. 16ರ ಸಂಜೆ 4 ಗಂಟೆಗೆ ಸ್ವಾಗತ ಸಮಿತಿ ಕಾರ್ಯಾಲಯ ಹಾಗೂ ಲಾಂಛನವನ್ನು ಬಿಡುಗಡೆ ಗೊಳಿಸುವಂತೆ ವಿನಂತಿಸಿಕೊಳ್ಳಲಾಯಿತು.

ಈ‌ ಸಂದರ್ಭದಲ್ಲಿ ಮಠದ ದಿವಾನರಾದ ನಾಗರಾಜ ಆಚಾರ್ಯರು, ಸಮಿತಿಯ ಕಾರ್ಯಾಧ್ಯಕ್ಷ ರಘುಪತಿ ಭಟ್, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ ಶೆಟ್ಟಿ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕ ಜಯಕರ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸಂತೋಷ್ ಶೆಟ್ಟಿ, ನಯೇಶ್ ಶೆಟ್ಟಿ, ,ರಾಘವೇಂದ್ರ ಕಿಣಿ, ರಮೇಶ್ ಭಟ್ ಕೆ, ರವೀಂದ್ರ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!