ಪಡುಬಿದ್ರಿ: ಬೈಕ್ – ಬಸ್ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಇಂದು ಮುಂಜಾನೆ ನಡೆದಿದೆ.
ಮೃತ ಯುವಕ ಹೆಸರಾಂತ ಯೂಟ್ಯೂಬರ್ ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(22) ಎಂದು ತಿಳಿದುಬಂದಿದೆ. ಮೋಟಾರು ಬೈಕ್ ಬಸ್ಸಿಗೆ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ.