ಬಡಗಬೆಟ್ಟು ಕ್ರೆಡಿಟ್ ಕೋ-ಆ.ಸೊಸೈಟಿ: ಸೆ. 17 ಚೇತನ ಮೊಬೈಲ್ ಆಪ್ ಅನಾವರಣ
ಉಡುಪಿ: ಪ್ರಸ್ತುತ ಸಂಪೂರ್ಣ ಡಿಜಿಟಲೀಕರಣದ ಮೂಲಕ ಉತ್ತಮ ಸೇವೆ ನೀಡುತ್ತಿರುವ ಬಡಗಬೆಟ್ಟು ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿಯು ಗ್ರಾಹಕರ ಅನುಕೂಲಕ್ಕಾಗಿ ಚೇತನ ಮೊಬೈಲ್ ಆಪ್ ಹಾಗೂ ಪೇಡೈರೆಕ್ಟ್ ಎಟಿಎಂ ಕಾರ್ಡ್ ಮತ್ತು ಪಿಗ್ಮಿ ಕಲೆಕ್ಷನ್ ನ ಮೊಬೈಲ್ ಆಪ್ ಬಿಡುಗಡೆ ಮಾಡಲಿದೆ.
ಸೆ. 17 ಭಾನುವಾರ ಪೂರ್ವಾಹ್ನ 11.30 ಕ್ಕೆ ಅಜ್ಜರಕಾಡು ಪುರಭವನದಲ್ಲಿ ಮೂರು ಯೋಜನೆಯ ಅನಾವರಣ ಕಾರ್ಯಕ್ರಮ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂಜೀವ ಕಾಂಚನ್ ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಕಾಂಗ್ರೆಸ್ ಮುಖಂಡರಾದ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ಐಸಿಐಸಿಐ ಬ್ಯಾಂಕ್ ನ ಡೆಪ್ಯುಟಿವ್ ಜನರಲ್ ಮ್ಯಾನೇಜರ್ ಅಭಿತಾಬ್ ದೀಕ್ಷಿತ್, ಸಹಕಾರಿ ರತ್ನ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಉಪಸ್ಥಿತರಿರುವರು.
ಸಮಾರಂಭಕ್ಕೆ ಬ್ಯಾಂಕಿನ ಗ್ರಾಹಕರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೊಸೈಟಿಯ ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ ಸೇರಿಗಾರ್ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.