ಬೆಂಗಳೂರು ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಮುರ್ಡೇಶ್ವರಕ್ಕೆ ವಿಸ್ತರಣೆ – ಬೇಡಿಕೆ ಈಡೇರಿದೆ: ಶಾಸಕ ಕಾಮತ್

ಬೆಂಗಳೂರು-ಮೈಸೂರು-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಪುಣ್ಯಕ್ಷೇತ್ರ ಮುರ್ಡೇಶ್ವರದವರೆಗೆ ವಿಸ್ತರಣೆಗೊಳ್ಳುವ ಮೂಲಕ ರಾಜಧಾನಿ, ಸಾಂಸ್ಕೃತಿಕ ರಾಜಧಾನಿ, ಕರಾವಳಿ ಹಾಗೂ ಪುಣ್ಯಕ್ಷೇತ್ರದ ಪ್ರಯಾಣಿಕರ ಹಲವು ದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹರ್ಷ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲು ರವರು ಈ ನಿಟ್ಟಿನಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಗಮನ ಸೆಳೆದು ನಿರಂತರ ಪ್ರಯತ್ನದ ಮೂಲಕ ಜನತೆಗೆ ಅನುಕೂಲ ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತದಲ್ಲಿ ದೇಶದ ಮೂಲೆ ಮೂಲೆಯೂ ಬೆಸೆದುಕೊಳ್ಳುತ್ತಿದೆ. ಇವರೆಲ್ಲರಿಗೂ ಸಮಸ್ತ ನಾಗರಿಕರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಶಾಸಕರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!