ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ: ಅಧ್ಯಕ್ಷರಾಗಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಮರು ಆಯ್ಕೆ
ಉಡುಪಿ: ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ಉಡುಪಿ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ತುಳಜಾ ಭವಾನಿ ಸಮುದಾಯ ಭವನದಲ್ಲಿ ಇಂದು ನಡೆಯಿತು.
ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಮರು ಆಯ್ಕೆಯಾಗಿದ್ದಾರೆ.
ಸಮುದಾಯದ ಎಸ್. ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆ ಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಅಲ್ಲದೇ ಶಿಕ್ಷಕರ ಕ್ಷೇತ್ರದಲ್ಲಿ ಪ್ರಶಸ್ತಿ ಗಳಿಸಿದ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ಹಾಗೂ ನೂತನವಾಗಿ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಸಮುದಾಯದ ಮೂವರಿಗೆ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶಪಾಲ್ ಎ ಸುವರ್ಣ ರವರು ಶುಭ ಹಾರೈಸಿದರು. ಅವರನ್ನು ಸಂಘದ ವತಿಯಿಂದ ಸಮುದಾಯದ ಪರವಾಗಿ ಸನ್ಮಾನ ಮಾಡಲಾಯಿತು.