ಶಿವಮೊಗ್ಗ: ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ-144 ಸೆಕ್ಷನ್‌ ಜಾರಿ

ಶಿವಮೊಗ್ಗ: ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ಘಟನೆ ನಡೆದಿದ್ದು ಬಳಿಕ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣದ ನಿರ್ಮಾಣವಾದ ಹಿನ್ನೆಲೆಯಲ್ಲಿ ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ.

ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಜನರು ಗುಂಪು ಸೇರದಂತೆ ಪೊಲೀಸರು ಮೈಕ್‌ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡುತ್ತಿದ್ದಾರೆ.

ಇನ್ನು, ರಾಪಿಡ್‌ ಅಕ್ಷನ್‌ ಫೋರ್ಸ್‌ (ಆರ್‌ಎಎಫ್) ಸಿಬ್ಬಂದಿ ರಾಗಿಗುಡ್ಡ ಬಡಾವಣೆಯಲ್ಲಿ ರೂಟ್‌ ಮಾರ್ಚ್‌ ನಡೆಸಿದರು. ಘಟನೆಗೆ ಸಂಬಂಧಿಸಿ 7 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!