ಮಂಗಳೂರು: ಚೂರಿಯಿಂದ ಇರಿದು ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಕರ್ಣಾಟಕ ಬ್ಯಾಂಕ್‌‌ನ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ಸ್ವತಃ ಚೂರಿಯಿಂದ ಇರಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಇಂದು ನಗರದಲ್ಲಿ ನಡೆದಿದೆ.

ಬ್ಯಾಂಕ್ ಅಧಿಕಾರಿಯನ್ನು ಕಾರ್ಕಳ ಮೂಲದ ವಾದಿರಾಜ್ (55) ಎಂದು ಗುರುತಿಸಲಾಗಿದೆ.

ನಗರದ ಬೋಂದೆಲ್ ಚರ್ಚ್ ಬಳಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಮತ್ತು ಕೊರಳಿಗೆ ಇರಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹೊರಗಡೆ ಹೋಗಿದ್ದ ಮನೆಮಂದಿ ಮರಳಿ ಬಂದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಾದಿರಾಜ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ವಾದಿರಾಜ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮಕ್ಕಳು ಕಾಲೇಜಿಗೆ ತೆರಳಿದ್ದು ಪತ್ನಿ ಮನೆಯಲ್ಲಿಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!