ಉಡುಪಿ: ರಾಜ್ಯೋತ್ಸವ ಪುರಸ್ಕೃತರಿಗೆ ಜಮಾ ಅತೆ ಇಸ್ಲಾಮಿ ಹಿಂದ್ ಅಭಿನಂದನೆ
![](https://udupitimes.com/wp-content/uploads/2023/11/IMG-20231112-WA0102-1024x473.jpg)
ಮಣಿಪಾಲ: ರಾಜ್ಯೋತ್ಸವ ಪುರಸ್ಕೃತರಿಗೆ ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ವತಿಯಿಂದ ಮಣಿಪಾಲದ ಮಸೀದಿಯಲ್ಲಿ ಅಭಿನಂದನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ವಿಜೇಯ ಹಾಜಿ ಅಬ್ದುಲ್ಲಾ ಪರ್ಕಳ ಹಾಗೂ ಆಯಿಶಾ ಕಾರ್ಕಳರನ್ನು ಸನ್ಮಾನಿಸಲಾಯಿತು.
![](httpss://udupitimes.com/wp-content/uploads/2023/11/IMG-20231112-WA0103-1024x473.jpg)
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಕಾಂಚನ್, ಶಾಂತಿ ಪ್ರಕಾಶನದ ವ್ಯವಸ್ಥಾಪಕರಾದ ಮುಹಮ್ಮದ್ ಕುಂಞ ಮಾತನಾಡಿದರು.
ಇದ್ರಿಸ್ ಹೂಡೆ ಪ್ರಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಸರ್ಫರಾಜ್ ಮನ್ನಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.