ಸಂಶಯಾಸ್ಪದ ರೀತಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಆತ್ಮಹತ್ಯೆ!

ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್‌‌ಡಿಎ ಅಧಿಕಾರಿಯೊಬ್ಬರು ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ರಕ್ಷಣಾಪುರಂನಲ್ಲಿ ನಡೆದಿದೆ.

ಸುಚಿತ್ರಾ (31) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಹಾಸನ ನಗರದ ರಕ್ಷಣಾಪುರಂನಲ್ಲಿನ ತಮ್ಮ ನಿವಾಸದಲ್ಲಿ ಸುಚಿತ್ರಾ ಅವರು ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಎಸ್​ಡಿಎ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.

ಅಪಘಾತದಲ್ಲಿ ಪತಿ ನಿಧನ ಹೊಂದಿದ ನಂತರ ಪತಿಯ ಹುದ್ದೆಯನ್ನು ಪತ್ನಿಗೆ ನೀಡಲಾಗಿತ್ತು. ಇದೀಗ ಇವರು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!