ಮೂರು ಮುತ್ತು ನಾಟಕದ ಪ್ರಸಿದ್ಧ ಹಾಸ್ಯ ಕಲಾವಿದ ಅಶೋಕ್ ಶಾನುಭಾಗ್ ನಿಧನ
![](https://udupitimes.com/wp-content/uploads/2023/12/IMG_20231209_082433.jpg)
ಕುಂದಾಪುರ: ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ .
ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮಕೃಷ್ಣ ಗೋವಿಂದ ಇನ್ನು ಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು.
ಇವರ ಅಗಲಿಕೆಯ ಸುದ್ದಿ ಅಪಾರ ಅಭಿಮಾನಿಗಳಿಗೆ ದುಃಖ ಉಂಟುಮಾಡಿದೆ. ಮೃತರ ಅಂತ್ಯ ಸಂಸ್ಕಾರ ಶನಿವಾರ ಬೆಳಗ್ಗೆ ಕುಂದಾಪುರದಲ್ಲಿ ನಡೆಯಲಿದೆಂದು ಕುಟುಂಬ ಮೂಲಗಳು ತಿಳಿಸಿವೆ.