ಕುಂದಾಪುರ: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಆತ್ಮಹತ್ಯೆ

ಕುಂದಾಪುರ, ಡಿ.11: ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಯುವಕನೋರ್ವ ತನ್ನ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.9ರಂದು ಮಧ್ಯಾಹ್ನ ವೇಳೆ ಕೋಟೇಶ್ವರದ ಕುಂಬ್ರಿ ಎಂಬಲ್ಲಿ ನಡೆದಿದೆ.

ಮೃತರನ್ನು ಕುಂಬ್ರಿಯ ಮಂಜುನಾಥ ಕೆ. ಎಂಬವರ ಮಗ ಮೋಹಿತ್ ಎಂ.(22) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಡಿ.8 ರಂದು ಬೆಂಗಳೂರಿನಿಂದ ಹೊರಟು ಡಿ.9ರಂದು ಬೆಳಗ್ಗೆ ಮನೆಗೆ ತಲುಪಿದ್ದರು. ಮಧ್ಯಾಹ್ನ ಊಟ ಮುಗಿಸಿ ಮನೆಯ ಮಹಡಿಯ ಮೇಲಿನ ರೂಮಿನ ಫ್ಯಾನಿನ ಕೊಂಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!