ರಾಹುಲ್ ಭಾರತ ದರ್ಶನ ಬಿಟ್ಟು ರಾಜಸ್ತಾನ ದರ್ಶನ ಮಾಡಲಿ: ಪ್ರಕಾಶ್ ಜಾವಡೇಕರ್ ವಾಗ್ದಾಳಿ

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ಗೆ ರಾಹುಲ್ ಗಾಂಧಿ ಭೇಟಿ ನೀಡಿದ ಬಗ್ಗೆ  ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿರುವ ಅವರು ಭಾರತ ದರ್ಶನ ಮಾಡುವ ಬದಲು ರಾಜಸ್ತಾನಕ್ಕೆ ಭೇಟಿ ನೀಡಬೇಕು ಎಂದು  ಸಲಹೆ ಮಾಡಿದ್ದಾರೆ.

ರಾಜಸ್ಥಾನದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕರೌಲಿಯ ದೇವಸ್ಥಾನಕ್ಕೆ ಸೇರಿದ ಜಾಗವನ್ನು ಅಕ್ರಮಿಸಿಕೊಳ್ಳಲು ಯತ್ನಿಸಿದ ಕೆಲವು ಗೂಂಡಾಗಳು ಅರ್ಚಕನನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ. ಅಲ್ಲದೇ ರಾಜಸ್ಥಾನದ ಹಲವು ಕಡೆ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದೆ. ಆದರೂ  ರಾಜ್ಯ ಸರ್ಕಾರಕ್ಕೆ ಏನನ್ನೂ ಮಾಡಲು ಆಗುತ್ತಿಲ್ಲ, ರಾಹುಲ್ ಅವರು ಭಾರತ ದರ್ಶನ ಮಾಡುವ ಬದಲು ರಾಜಸ್ತಾನಕ್ಕೆ  ಭೇಟಿ ನೀವಿ ಪರಿಸ್ಥಿತಿ ಅರಿಯಲಿ ಎಂದಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ನಲ್ಲಿನ ದಲಿತ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಹಿನ್ನಲೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ತೀವ್ರ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರಗಳ ವಿರುದ್ಧ ಹರಿಹಾಯ್ದಿದ್ದರು. 

Leave a Reply

Your email address will not be published. Required fields are marked *

error: Content is protected !!