ಕಾಪು: 18.5ಲಕ್ಷ ರೂ.‌ ವೆಚ್ಚದ ಶಿಥಲೀಕೃತ ಶವಗಾರ ಕಟ್ಟಡಕ್ಕೆ‌ ಗುದ್ದಲಿ ಪೂಜೆ

ಕಾಪು: ವಿಧಾನಸಭಾ ಕ್ಷೇತ್ರದ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಶಿಥಲೀಕೃತ ಶವಗಾರ ಕಟ್ಟಡ” ನಿರ್ಮಾಣಕ್ಕೆ ಖನಿಜ ಪ್ರತಿಷ್ಠಾನ ನಿಧಿಯಿಂದ 18.5 ಲಕ್ಷ ರೂ. ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗುದ್ದಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಸ್ಥಳೀಯ ಪುರಸಭಾ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ರೋಷನಿ ಪೂಂಜ ಹಾಗೂ ಕಾಪು ಪುರಸಭೆಯ ಸದಸ್ಯರು ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!