ವಿಧಾನಸೌಧದ ಮುಂಭಾಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ಬೆಂಗಳೂರು, ಜ.10: ವಿಧಾನಸೌಧದ ಮುಂಭಾಗದಲ್ಲಿ ದಂಪತಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜೆ.ಜೆ ನಗರದ ನಿವಾಸಿಗಳಾದ ಶಾಯಿಸ್ತಾ ದಂಪತಿಗಳು ವಿಧಾನಸೌಧದ ಮುಂಭಾಗಕ್ಕೆ ಬಂದಿದ್ದು, ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಇಬ್ಬರಿಂದ ಸೀಮೆಎಣ್ಣೆಯನ್ನು ಕಿತ್ತುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಬ್ಯಾಂಕ್‌ನಿಂಧ ಸಾಲ ಪಡೆದುಕೊಂಡಿದ್ದ ದಂಪತಿಗಳು ಸಾಲವನ್ನು ತೀರಿಸಿದ ಹಿನ್ನಲೆಯಲ್ಲಿ, ಬ್ಯಾಂಕ್‌ನವರು ಜಮೀನನ್ನು ಹರಾಜು ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಈ ಕೃತ್ಯಕ್ಕೆ ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!