ಉಡುಪಿ: ಸಿಟಿಬಸ್ ಚಾಲಕನಿಗೆ ಬಿಯರ್ ಬಾಟಲಿಯಿಂದ ಹಲ್ಲೆ

ಉಡುಪಿ: ಸಿಟಿ ಬಸ್ ಚಾಲಕರಿಬ್ಬರಿಗೆ ಚಾಕು ಇರಿತಕ್ಕೆ ಸಂಬಂಧಿಸಿ ಬಸ್ ಚಾಲಕರಿಬ್ಬರ ವಿರುದ್ದ ಪ್ರತಿ ದೂರು ದಾಖಲಾಗಿದೆ.

ಸಿಟಿ ಬಸ್ ಚಾಲಕರಾದ ಮಲ್ಪೆ ಬಲರಾಮ ನಗರದ ಮುಹಮ್ಮದ್ ಬುರ್ಹಾನ್(29) ಎಂಬವರು ಆಟೋ ರಿಕ್ಷಾದಲ್ಲಿ ಸತೀಶ ಮತ್ತು ಸುದೀಪ್ ಎಂಬವರೊಂದಿಗೆ ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಅಂಗಡಿಯ ಬಳಿ ಹೋಗುತ್ತಿದ್ದಾಗ 4-5 ಬೈಕ್ ಗಳಲ್ಲಿ ಬಂದ ಶಿಶಿರ್, ಗಣೇಶ್, ವಿಖ್ಯಾತ್, ಸಂತು, ಚೇತು, ಶರತ್, ಇತರರು, ರಿಕ್ಷಾವನ್ನು ಅಡ್ಡಗಟ್ಟಿ ಕೈಯಿಂದ ಹೊಡೆದು, ಕಾಲಿನಿಂದ ತುಳಿದು ಚೂರಿ ಹಾಗೂ ಬಿಯರ್ ಬಾಟಲಿಯಿಂದ ಇರಿದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ್ದಾರೆಂದು ದೂರಲಾಗಿದೆ.

ಜ.17ರ ರಾತ್ರಿ ಸಿಟಿ ಬಸ್ ನಿಲ್ದಾಣದಲ್ಲಿ ಉಡುಪಿಯ ಪರ್ಯಾಯ ನಿಮಿತ್ತ ಟಿಎಂಟಿ ಮತ್ತು ಜೆಎಂಟಿ ಬಸ್ ಗಳ ಸಿಬ್ಬಂದಿ ಮಧ್ಯೆ ವಾಗ್ವಾದ ನಡೆದಿದ್ದು, ಈ ಬಗ್ಗೆ ಸುದೀಪ್ ದೂರು ನೀಡಿದ ದ್ವೇಷದಲ್ಲಿ ಆರೋಪಿಗಳು ಈ ಕೃತ್ಯ ಎಸಗಿದ್ದಾರೆಂದು ಬುರ್ಹಾನ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!