ಬೈಂದೂರು: ಬೈಕ್ ಕಳವು ಆರೋಪಿಯ ಬಂಧನ

ಬೈಂದೂರು ಜ.26(ಉಡುಪಿ ಟೈಮ್ಸ್ ವರದಿ): ತಾಲೂಕಿನ ಯಡ್ತರೆ ಗ್ರಾಮದ ಶಿವಸಾಗರ ಹೋಟೆಲ್ ಎದುರು ನಿಲ್ಲಿಸಿದ್ದ ಸ್ಕೂಟಿ ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಮೂಲದ ಲಕ್ಷ್ಮಣ್ ಅಂಬಾಜಿ (26) ಬಂಧಿತ ಆರೋಪಿ. ಬಂಧಿತನಿಂದ ಪೊಲೀಸರು ಕಳವು ಮಾಡಿದ್ದ ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ.

ಜ.2 ರಂದು ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಶಿವಸಾಗರ ಹೋಟೆಲ್ ಎದುರು ಆನಂದ ಎಂಬವರು ನಿಲ್ಲಿಸಿದ ತಮ್ಮ ಸ್ಕೂಟಿಯನ್ನು ಕಳ್ಳನೋರ್ವ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಜ.25 ರಂದು ಆರೋಪಿತನಾದ ಲಕ್ಷ್ಮಣ್ ಅಂಬಾಜಿ ಗುಳೇದಗುಡ್ಡ ಎಂಬಾತನನ್ನು ಹಾವೇರಿ ಜಿಲ್ಲೆಯ ಬಂಕಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡೆ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪ್ರಕರಣವೊಂದು ದಾಖಲಾಗಿರುವ ಬಗ್ಗೆ ವಿಚಾರಣೆ ವೇಳೆ ತಿಳಿದು ಬಂದಿದೆ ಎಂಬ ಮಾಹಿತಿ ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!