ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ ಇಲ್ಲ – ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಂಡಿಸಿರುವ ಬಜೆಟ್ ಅಭಿವೃದ್ಧಿಗೆ ವಿಮುಖವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರಸ್ತುತ ಅತ್ಯಂತ ಜ್ವಲಂತ ಸಮಸ್ಯೆಯಾಗಿರುವ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೇಂದ್ರ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ.ಬಿಜೆಪಿ ಕೋಟಿ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ನೀಡಿದ್ದ ಭರವಸೆಗಳೆಲ್ಲ ಭರವಸೆಯಾಗಿಯೇ ಉಳಿದಿದೆ. ಈ ಬಜೆಟ್ ನಲ್ಲಾದರೂ ಗಂಭೀರ ಕ್ರಮ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದೂ ಹುಸಿಯಾಗಿದೆ. ಕರ್ನಾಟಕಕ್ಕೆ ಈ ಬಜೆಟ್ ನಲ್ಲಿ ಏನನ್ನೂ ನೀಡಲಾಗಿಲ್ಲ. ರಾಜ್ಯದ ಪಾಲಿಗೆ ಅತ್ಯಂತ ನಿರಾಶಾದಾಯಕ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತ ಕೃಷಿ ಪ್ರಧಾನ ದೇಶ. ಆದರೆ ಕೃಷಿ ಅಭಿವೃದ್ಧಿಗಾಗಲಿ, ಗ್ರಾಮೀಣ ಪ್ರದೇಶದ ಕಡೆಗಾಗಲಿ ಬಜೆಟ್ ಲಕ್ಷ್ಯವನ್ನೇ ಹರಿಸಿಲ್ಲ. ಕೇವಲ ಶ್ರೀಮಂತರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಜೆಟ್ ಮಂಡಿಸಿದಂತಿದೆ ಎಂದು ಚನ್ನರಾಜ ಪ್ರತಿಕ್ರಿಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!