ರಾಜ್ಯದಲ್ಲಿ ಮತ್ತೆ 40% ಕಮಿಷನ್ ಸದ್ದು… ಕೆಂಪಣ್ಣ ಆರೋಪ

ಬೆಂಗಳೂರು: ರಾಜ್ಯದಲ್ಲಿ 40 ಪರ್ಸೆಂಟ್ ಪರಿಸ್ಥಿತಿ ಮತ್ತೆ ಮುಂದುವರಿದಿದೆ. ಈ ಹಿಂದೆ ಶಾಸಕರೇ ನೇರವಾಗಿ ಕಮಿಷನ್ ಕೇಳುತ್ತಿದ್ದರು. ಈಗ ಅಧಿಕಾರಿಗಳು ಬೇರೆಯವರ ಹೆಸರಿನಲ್ಲಿ ಹಣ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದರು.

ಬಿಬಿಎಂಪಿಯಲ್ಲಿ 15 ಮಂದಿ ಅಧಿಕಾರಿಗಳು ಭ್ರಷ್ಟರಿದ್ದಾರೆ‌. ಅಧಿಕಾರಿಗಳದ್ದೇ ಕಾರುಬಾರು ಆಗಿ ಹೋಗಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಮತ್ತು ಡಿಸಿಎಂ ಅವರ ಗಮನಕ್ಕೆ ತರಲಾಗುವುದು ಎಂದರು. ಮಾರ್ಚ್ 4 ರಂದು ಅರಮನೆ ಮೈದಾನದಲ್ಲಿ ಕಾಂಟ್ರಾಕ್ಟರ್ ಅಸೋಸಿಯೇಷನ್ ಸಮ್ಮೇಳನ ನಡೆಸಲಿದೆ‌. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಲಾಗುವುದು. ಅಧಿಕಾರಿಗಳ ಭ್ರಷ್ಟಾಚಾರ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ಭೇಟಿ ಮಾಡಲಾಗುವುದು ಎಂದು ಕೆಂಪಣ್ಣ ಹೇಳಿದರು.

Leave a Reply

Your email address will not be published. Required fields are marked *

error: Content is protected !!