ಕಲಬುರಗಿ: ಸಂಸದ ಉಮೇಶ್ ಜಾಧವ್ ಬೆಂಬಲಿಗನ ಭೀಕರ ಹತ್ಯೆ

ಕಲಬುರಗಿ: ಸಂಸದ ಉಮೇಶ್ ಜಾಧವ್ ಅವರ ಆಪ್ತರಲ್ಲಿ ಒಬ್ಬನಾದ ಬಿಜೆಪಿ ಮುಖಂಡನ ಹತ್ಯೆ ನಡೆದಿರುವ ಘಟನೆ ದೇವಲಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಕೊಲೆಗೀಡಾದ ವ್ಯಕ್ತಿಯನ್ನು ಸಾಗನೂರ ಗ್ರಾಮದ ಗಿರೀಶ್ ಚಕ್ರ ಎಂದು ಗುರುತಿಸಲಾಗಿದೆ. ಈತನನ್ನು ಸಂಸದರು ಇತ್ತೀಚೆಗೆ ಬಿಎಸ್ ಎನ್ ಎಲ್ ಸಲಹಾ ಸಮಿತಿಗೆ ನೇಮಕ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪಾರ್ಟಿ ಕೊಡುವುದಾಗಿ ಹೇಳಿ ಜಮೀನಿಗೆ ಕರೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಲಾಗಿದೆ ಎಂದು ತಿಳಿದುಬಂದಿದೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸಾಗನೂರ ಗ್ರಾಮದ ಸಚಿನ್ ಮತ್ತು ಗ್ಯಾಂಗ್ ನಿಂದ ಕೊಲೆ ನಡೆಸಿರುವ ಅನುಮಾನ ವ್ಯಕ್ತವಾಗಿದ್ದು, ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು, ದೇವಲಗಾಣಗಾಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!