ಶಿವಮೊಗ್ಗದಿಂದ ಪಕ್ಷೇತರನಾಗಿ ಸ್ಪರ್ಧಿಸುವೆ- ಕೆ.ಎಸ್. ಈಶ್ವರಪ್ಪ ಘೋಷಣೆ

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿರ್ಧಾರ ಪ್ರಕಟಿಸಿದ್ದಾರೆ.

ಬಂಜಾರ ಸಮುದಾಯ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ತಮ್ಮದು ಆತುರದ ನಿರ್ಧಾರವಲ್ಲ. ಇದು ಮೋದಿ ವಿರೋಧಿ ನಡೆಯಲ್ಲ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಗಬಾರದು. ಹಿಂದುತ್ವಕ್ಕೆ, ಕಾರ್ಯಕರ್ತರಿಗೆ ಅನ್ಯಾಯವಾಗಬಾರದು ಎಂದು ಈ ನಿರ್ಧಾರ ಎಂದು ಈಶ್ವರಪ್ಪ ತಿಳಿಸಿದರು.

ನಾಮಪತ್ರ ಸಲ್ಲಿಕೆಗೆ ಜನಸ್ತೋಮವೇ ಹರಿದು ಬರಬೇಕು. ಮೋದಿ ಕಂಡ ಬಿಜೆಪಿ ಪಕ್ಷ ನಮ್ಮದಾಗಬೇಕು. ಅಪ್ಪ ಮಕ್ಕಳಿಂದ ಪಕ್ಷವನ್ನು ಉಳಿಸಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!