ಉಡುಪಿ ಜಿಲ್ಲಾ ಕಾಂಗ್ರೆಸ್‌: ದಿ.ಆಸ್ಕರ್ ಜನ್ಮದಿನಾಚರಣೆ

ಉಡುಪಿ, ಮಾ.28: ರಾಷ್ಟ್ರ ನಾಯಕರಾಗಿ, ಜಿಲ್ಲೆಯ ಅಭಿವೃದ್ಧಿ ಹರಿಕಾರರಾದ ದಿ.ಆಸ್ಕರ್ ಫೆರ್ನಾಂಡೀಸ್ ಅವರ ಜನ್ಮ ದಿನವನ್ನು ಜಿಲ್ಲಾ ಕಾಂಗ್ರೆಸ್ ಪಕ್ಷ, ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗ ಇರುವ ಅವರ ಪುತ್ತಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಬುಧವಾರ ಆಚರಿಸಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು, ಪಕ್ಷದ ಹಿರಿಯ ಮುಖಂಡರಾದ ಎಂ.ಎ. ಗಪೂರ್, ನಾಗೇಶ್‌ ಕುಮಾರ್ ಉದ್ಯಾವರ ಅವರು ಆಸ್ಕರ್ ಫೆರ್ನಾಂಡೀಸ್‌ರ ಒಡನಾಟ ಹಾಗೂ ಅವರ ಧೀಮಂತ ವ್ಯಕ್ತಿತ್ವವನ್ನು ನೆನಪಿಸಿಕೊಂಡರು.

ಕಾರ್ಯಕ್ರಮದಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೇದಾರನಾಥ್ ಕಿಶೋರ್, ಗೀತಾ ವಾಗ್ಳೆ, ರವಿ ಶೆಟ್ಟಿ, ದಿನೇಶ್ ಪುತ್ರನ್, ಬಿ.ನರಸಿಂಹಮೂರ್ತಿ, ವಿಲಿಯಂ ಮಾರ್ಟಿಸ್, ಭಾಸ್ಕರ ರಾವ್ ಕಿದಿಯೂರು, ಕುಶಲ ಶೆಟ್ಟಿ, ಹರೀಶ್ ಕಿಣಿ, ಮುರಳಿ ಶೆಟ್ಟಿ, ಪ್ರಖ್ಯಾತ ಶೆಟ್ಟಿ

Leave a Reply

Your email address will not be published. Required fields are marked *

error: Content is protected !!