ಲೋಕಸಭಾ ಚುನಾವಣೆ: ಕೊನೆಗೂ ಕೋಲಾರಕ್ಕೆ ಅಭ್ಯರ್ಥಿಯನ್ನು ಘೋಷಿಸಿದ ಕಾಂಗ್ರೆಸ್

ಕೋಲಾರ : ಲೋಕಸಭಾ ಚುನಾವಣೆಗೆ ಕೋಲಾರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ.ವಿ ಗೌತಮ್‌ ಅವರ ಹೆಸರು ಅಂತಿಮಗೊಳಿಸಿ ಎಐಸಿಸಿ ಪ್ರಕಟಿಸಿದೆ.

ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಸಚಿವ ಕೆ.ಎಚ್.ಮುನಿಯಪ್ಪ ಗುಂಪುಗಳ ನಡುವಿನ ಗುಂಪುಗಾರಿಕೆ ಕಾರಣ ಟಿಕೆಟ್ ಹಂಚಿಕೆ ಕಗ್ಗಂಟಾಗಿತ್ತು. ಇಬ್ಬರ ಜಗಳ ಮೂರನೇ ವ್ಯಕ್ತಿಗೆ ಲಾಭ ಎಂಬಂದಂತೆ ಕೋಲಾರಕ್ಕೆ ಹೊರಗಿನ ಹೊಸ ಮುಖಕ್ಕೆ ಅವಕಾಶ ನೀಡಲಾಗಿದೆ.

ಅಲ್ಲದೆ, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಸಚಿವ ಕೆ.ಎಚ್ ಮುನಿಯಪ್ಪ ಕುಟುಂಬಕ್ಕೆ ನೀಡಿದರೆ ಜಿಲ್ಲೆಯ‌ ಐದು ಜನ ಶಾಸಕರು ರಾಜಿನಾಮೆ ನೀಡುವುದಾಗಿ ಕಾಂಗ್ರೆಸ್‌‌ ಶಾಸಕರು ಹೈಕಮಾಂಡ್ ಗೆ ಎಚ್ಚರಿಕೆ ನೀಡಿದ್ದರು.

ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ನಸೀರ್ ಅಹ್ಮದ್ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

Leave a Reply

Your email address will not be published. Required fields are marked *

error: Content is protected !!