ಉಳ್ಳಾಲ: ಚೂರಿಯಿಂದ ಇರಿದು ವ್ಯಕ್ತಿಯ ಹತ್ಯಾಯತ್ನ

ಮಂಗಳೂರು: ಪಂಜಿಮೊಗರು ಮೂಲದ ನಿವಾಸಿ ಪ್ರಸ್ತುತ ಉಳ್ಳಾಲ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಮೀದ್ ಎಂಬವರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಇಂದು ನಡೆದಿದೆ.

ಗಂಭೀರ ಸ್ಥಿತಿಯಲ್ಲಿದ್ದ ಹಮೀದ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಬಂದರು ಭಾಗದ ಖ್ಯಾತ ಈಜುಪಟು ಜಾವೇದ್ ಎಂಬಾತ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.

ಉಳ್ಳಾಲ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಯಾವ ವಿಚಾರದಲ್ಲಿ ಕೊಲೆಗೆ ಯತ್ನಿಸಲಾಗಿದೆ ಎಂದು ತನಿಖೆ ನಡೆಸುತ್ತಿದ್ದು, ಮೇಲ್ನೋಟಕ್ಕೆ ಹಣದ ವಿಚಾರದಲ್ಲಿ ಕೊಲೆ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆ ಹಮೀದ್ ಅವರ ಪತ್ನಿ ಮತ್ತು ಮಗಳು ಪಂಜಿಮೊಗರುವಿನಲ್ಲಿ ಕೊಲೆಯಾಗಿದ್ದರು.  2011ರ ಜೂ.28ರಂದು ರಜಿಯಾ ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ ಅವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಮಂಗಳೂರಿನದ್ಯಾಂತ ಆತಂಕ ಸೃಷ್ಟಿಯಾಗಿತ್ತು..

Leave a Reply

Your email address will not be published. Required fields are marked *

error: Content is protected !!