ದೇವೇಗೌಡರನ್ನು ಭೇಟಿಯಾದ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ದೇಶದ ಮಾಜಿ ಪ್ರಧಾನಿಗಳು, ಜನತಾದಳದ ಪರಮೋಚ್ಚ ನಾಯಕರಾದ ಶ್ರೀ ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

“ನಾನು ಅತ್ಯಂತ ಗೌರವಿಸುವ ನಾಯಕರಲ್ಲಿ ದೇವೇಗೌಡರೂ ಒಬ್ಬರು. ವಿರೋಧ ಪಕ್ಷದ ಸ್ಥಾನದಲ್ಲಿ ಇದ್ದಾಗಲೂ ಅವರು ನನ್ನನ್ನು ಅತ್ಯಂತ ಪ್ರೀತಿಯಿಂದ ಕಾಣುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಾ ಎಂದು ದೇವೇಗೌಡರು ಆಶೀರ್ವದಿಸಿದರು” ಎಂದು ಕೋಟ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!