ಸುರೇಂದ್ರ ಬಂಟ್ವಾಳ್ ಹತ್ಯೆ, ಇನ್ನಾ ಕಿಶನ್ ಹೆಗ್ಡೆ ಹತ್ಯೆಗೆ ಪ್ರತೀಕಾರ – ಸತೀಶ್ ಕುಲಾಲ್

ಬಂಟ್ವಾಳ: ತುಳು ಚಿತ್ರ ನಟ ಸುರೇಂದ್ರ ಬಂಟ್ವಾಳ ಹತ್ಯೆ ನಾನೇ ಮಾಡಿದ್ದು ಎಂದು ಹೇಳಿಕೊಂಡು ವ್ಯಕ್ತಿಯೋರ್ವ ಪೊಲೀಸರಿಗೆ ವಾಯ್ಸ್‌ ಮೆಸೇಜ್‌ ಮಾಡಿದ್ದಾನೆ ಎಂದು ಉನ್ನತ ಮೂಲವೊಂದು ತಿಳಿಸಿದೆ.

ಆರೋಪಿಯನ್ನು ಸುರೇಂದ್ರ ಜೊತೆಗಿದ್ದ ಸತೀಶ್ ಕುಲಾಲ್ ಎಂದು ಹೇಳಲಾಗಿದ್ದು ಆತನು ಇದು ಹಿರಿಯಡ್ಕದಲ್ಲಿ ಇನ್ನಾ ಕಿಶನ್ ಹೆಗ್ಡೆ ಹತ್ಯೆಗೆ ಪ್ರತೀಕಾರ ಎಂದು ತಿಳಿಸಿದ್ದಾನೆ ಎಂದು ಹೇಳಲಾಗಿದೆ.

ಆರೋಪಿ ಸತೀಶ್ ಕುಲಾಲ್ ಪೊಲೀಸರಿಗೆ ಕಳುಹಿಸಿರುವ ವಾಯ್ಸ್ ಮೆಸೇಜ್‌ನಲ್ಲಿ, ”ನಾನು ಸುರೇಂದ್ರನೊಂದಿಗೆ 22 ವರ್ಷಗಳಿಂದ ಸ್ನೇಹಿತನಾಗಿದ್ದೇನೆ. ಆತನ ಎಲ್ಲಾ ಅವ್ಯವಹಾರಗಳು ನನಗೆ ತಿಳಿದಿದೆ. ಸುರೇಂದ್ರ ಕಿಶನ್ ಹೆಗ್ಡೆ ಕೊಲೆಗೆ ಹಣದ ಸಹಾಯ ಮಾಡಿದ್ದ. ಸುರೇಂದ್ರ ಕಿಶನ್ ಹೆಗ್ಡೆ ಕೊಲೆಗಾಗಿ ಹಣ ಸಹಾಯ ಮಾಡಿದಾಗ ನಾನು ವಿರೋಧಿಸಿದ್ದೆ. ಆಗ ಸುರೇಂದ್ರ ನನ್ನನ್ನೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ನಾನು ಕಿಶನ್ ಹೆಗ್ಡೆ ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿದ್ದೇನೆ. ಎರಡು ದಿನದಲ್ಲಿ ಪೊಲೀಸರ ಮುಂದೆ ಶರಣಾಗುತ್ತೇವೆ” ಎನ್ನುವ ವಾಯ್ಸ್ ಮೆಸೇಜ್ ಕಳುಹಿಸಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!