ಧರ್ಮಸ್ಥಳ: ಶ್ರೀರಾಮ ನಾಮ ಸಪ್ತಾಹ, ಪ್ರತಿಷ್ಠಾ ಜಾತ್ರ ಮಹೋತ್ಸವ

ಉಡುಪಿ ಎ.14(ಉಡುಪಿ ಟೈಮ್ಸ್ ವರದಿ): ಧರ್ಮಸ್ಥಳದ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಇದರ ವತಿಯಿಂದ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮಿಜಿಯವರ ಸ್ಮರಣೆಯೊಂದಿಗೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ.10 ರಿಂದ 17ರ ವರೆಗೆ ಇಲ್ಲಿನ ಶ್ರೀ ಭಗವಾನ್ ನಿತ್ಯಾನಂದ ಮಂದಿರದಲ್ಲಿ 16 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪ್ರತಿಷ್ಠಾ ಜಾತ್ರ ಮಹೋತ್ಸವ ಮತ್ತು ಬ್ರಹ್ಮರಥೋತ್ಸವ ಕಾರ್ಯಕ್ರಮ ನಡೆಯಲಿದೆ.

ಏ.14ರಂದು ರಾತ್ರಿ 8ಗಂಟೆಗೆ ಶ್ರೀ ದುರ್ಗಾಪರಮೇಶ್ವರಿ ದೇವಿಯ ಮೂರ್ತಿ ಬಲಿ ಉತ್ಸವ ಚಂದ್ರಮಂಡಲ ರಥೋತ್ಸವ

ಏ15ರಂದು ರಾತ್ರಿ 8:00 ಗಂಟೆಗೆ ಶ್ರೀ ಗೋಪಾಲಕೃಷ್ಣ ದೇವರ ಬಲಿ ಉತ್ಸವ ಬೆಳ್ಳಿರಥೋತ್ಸವ

ಏಪ್ರಿಲ್ 16ರಂದು ರಾತ್ರಿ 8 ಗಂಟೆಗೆ ಶ್ರೀ ದತ್ತಾತ್ರೇಯ ಮೂರ್ತಿ ಮತ್ತು ಶ್ರೀ ಆಂಜನೇಯ ದೇವರ ಮೂರ್ತಿ ಬಲಿ ಉತ್ಸವ ಮತ್ತು ಶ್ರೀ ಹನುಮಾನ್ ರಥೋತ್ಸವ

ಏ 17ರಂದು ಬೆಳಿಗ್ಗೆ 9:30 ಶ್ರೀ ರಾಮ ತಾರಕ ಮಂತ್ರ ಯಜ್ಞ ಮಂಗಳಂ ಮಧ್ಯಾಹ್ನ ಶ್ರೀ ದೇವರ ಪಾಲಕಿ ಬಲಿ ಉತ್ಸವ ರಾತ್ರಿ 7:00 ಯಿಂದ ಕ್ಷೇತ್ರದ ರಕ್ತೇಶ್ವರಿ ಮತ್ತು ಗುಳಿಗ ದೈವಗಳಿಗೆ ನೇಮೋತ್ಸವ, ರಾತ್ರಿ 10 ಗಂಟೆಗೆ ಮಹಾ ಬ್ರಹ್ಮರಥೋತ್ಸವ

ಏ 19ರಂದು ಆದಿ ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ರಾತ್ರಿ 8 ಗಂಟೆಯಿಂದ ಸನ್ಯಾಸಿ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ನೇಮಹೋತ್ಸವ

Leave a Reply

Your email address will not be published. Required fields are marked *

error: Content is protected !!