ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಗಣೇಶ್ ರಾಜ್ ಸರಳಬೆಟ್ಟು ಆಯ್ಕೆ

ಉಡುಪಿ. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕರ ಶಿಫಾರಸಿನ ಮೇರೆಗೆ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ (ಸಾಮಾಜಿಕ ಜಾಲತಾಣ) ರನ್ನಾಗಿ ನೇಮಕ ಮಾಡಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ನ ಸದಸ್ಯರಾದ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ದಿವಾಕರ್ ಕುಂದರ್, ಕಾಂಗ್ರೆಸ್ ಮುಖಂಡ ಕೆ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ರವಿ ಶೆಟ್ಟಿ ಅಂಬಲಪಾಡಿ, ಉಡುಪಿ ಬ್ಲಾಕ್ ಕಾಂಗ್ರೆಸ್ಸಿನ ಮಾಧ್ಯಮ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಮೊದಲಾದವರು ಜೊತೆಗಿದ್ದು ಶುಭ ಹಾರೈಸಿದರು.

ಸರಳೆಬೆಟ್ಟು ಅವರು ಈ ಹಿಂದೆ ಕನ್ನಡ ಪರ ಸಂಘಟನೆಯಲ್ಲಿ ಮಾಧ್ಯಮ ವಕ್ತಾರರಾಗಿ ಗುರುತಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!