ರಾ.ಹೆದ್ದಾರಿಯಲ್ಲಿ ಲಾರಿ ಡಿಕ್ಕಿ- ಬೈಕ್ ಸವಾರ ಉಡುಪಿ ನಗರಸಭೆಯ ಸಿಬ್ಬಂದಿ ಮೃತ್ಯು

ಉಡುಪಿ, ಏ.18: ದ್ವಿಚಕ್ರ ವಾಹನ ಸವಾರ ಉಡುಪಿ ನಗರ ಸಭೆಯ ಸಹಾಯಕ ವಾಟರ್ ಸಪ್ಲೈರ್ ಲಾರಿಯಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯ ಉಪ್ಪೂರು ಬಳಿ ಸಂಭವಿಸಿದೆ.

ಹೇರೂರು ಮೂಲದ ಕೃಷ್ಣ ಗಾಣಿಗ(54) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಕೃಷ್ಣ ಅವರು ತನ್ನ ದ್ವಿಚಕ್ರ ವಾಹನದಲ್ಲಿ ಸಂತೆಕಟ್ಟೆಯಿಂದ ಬ್ರಹ್ಮಾವರ ಕಡೆಗೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಏಕಪಥದಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಕೃಷ್ಣಾ ಎದುರುಗಡೆಯಿಂದ ಬರುತ್ತಿದ್ದ ಲಾರಿಯಡಿಗೆ ಸಿಲುಕಿ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಕೃಷ್ಣ ಅವರು ಎಲೆಕ್ಟ್ರಿಷಿಯನ್ ಹಾಗೂ ಉಡುಪಿ ನಗರ ಸಭೆಯಲ್ಲಿ ಸಹಾಯಕ ವಾಟರ್ ಸಪ್ಲೈರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿ ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ.

Leave a Reply

Your email address will not be published. Required fields are marked *

error: Content is protected !!