ಪ್ರಧಾನಿ ಮೋದಿ ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ- ಸಿ.ಎಂ ಸಿದ್ದರಾಮಯ್ಯ ಆರೋಪ

ಮೈಸೂರು, ಏ. 20: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ದೇಶದ ಜನರಿಗೆ ಖಾಲಿ ಚೊಂಬು ಕೊಟ್ಟಿದೆ. ಅದನ್ನೇ ನಾವು ಜಾಹೀರಾತು ನೀಡಿದ್ದೇವೆ. ಮೋದಿ ಜನರಿಗೆ 15 ಲಕ್ಷ ರೂ. ನೀಡಿದ್ರಾ? 100 ದಿನಗಳಲ್ಲಿ ವಿದೇಶದಿಂದ ಕಪ್ಪು ಹಣ ತೆಗೆದುಕೊಂಡು ಬಂದು ಎಲ್ಲರ ಖಾತೆಗೂ ಜಮಾ ಮಾಡುತ್ತೇವೆ ಎಂದು ಹೇಳಿದ್ರಲಾ, ಹಣ ಹಾಕಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ರಾ? ರೈತರ ಆದಾಯ ದ್ವಿಗುಣ ಮಾಡಿದ್ರಾ? ಒಳ್ಳೆಯ ದಿನಗಳು ಬಂದ್ವಾ? ಈ ಕಾರಣದಿಂದಲೇ ನಾವು ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ಹೇಳುತ್ತಿರುವುದು ಎಂದು ವಾಗ್ದಾಳಿ ನಡೆಸಿದರು.

ಮೋದಿ ಅವರು ಈವರೆಗೆ ಒಂದು ಆಶ್ವಾಸನೆಯನ್ನೂ ಈಡೇರಿಸಿಲ್ಲ. ಹೆಚ್ ಡಿ ಕುಮಾರಸ್ವಾಮಿ ಏನಾದರೂ ಹೇಳಿಕೊಳ್ಳಲಿ. ಆದರೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿಲ್ಲ. ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಅಭಿವೃದ್ಧಿ ಕೆಲಸಗಳನ್ನೂ ಮುಂದುವರಿಸುತ್ತಿದ್ದೇವೆ ಎಂದು ತಿಳಿಸಿದರು. 

Leave a Reply

Your email address will not be published. Required fields are marked *

error: Content is protected !!