ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರಕಾರ

ಬೆಂಗಳೂರು: ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ.

ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ಪರಿಹಾರದಡಿ ಬರ ಪರಿಹಾರ ಘೋಷಿಸಿದೆ.

ಕಳೆದ ವರ್ಷ ಸೆಪ್ಟೆಂಬರ್​ ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರದ ಯಾವುದೇ ಪ್ರತಿಕ್ರಿಯೆ ಇಲ್ಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು.

ಸುಪ್ರೀಂಕೋರ್ಟ್‌ ಮಧ್ಯಪ್ರವೇಶದೊಂದಿಗೆ ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಇದೀಗ ಬರ ಪರಿಹಾರ ಘೋಷಣೆ ಮಾಡಿದೆ.

ನೆರೆ ಪರಿಹಾರವೆಂದು ತಮಿಳುನಾಡಿಗೂ 275 ಕೋಟಿ ರೂ. ಪರಿಹಾರವನ್ನು ಕೇಂದ್ರ ಸರಕಾರ ನೀಡಿದೆ.

Leave a Reply

Your email address will not be published. Required fields are marked *

error: Content is protected !!