ಚೇತನಾ ನವೋದಯ ಸ್ವಸಹಾಯ ಗುಂಪುಗಳ ಮಾಹಿತಿ ಕಾರ್ಯಾಗಾರ

ಉಡುಪಿ, ಮೇ 16: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸಾಟಿಯ ಚೇತನಾ ಸ್ವಸಹಾಯ ಗುಂಪುಗಳ ಸದಸ್ಯರ ಮಾಹಿತಿ ವಿನಿಮಯ ಕಾರ್ಯಾಗಾರವು ಸಂಘದ ಜಗನ್ನಾಥ ಸಭಾಭವನದಲ್ಲಿ ಜರಗಿತು.

ಸ್ವಸಹಾಯ ಗುಂಪುಗಳ ಬಲವರ್ಧನೆಗಾಗಿ ಹಮ್ಮಿಕೊಂಡ ಈ ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 100 ಸ್ವಸಹಾಯ ಗುಂಪುಗಳ ಸದಸ್ಯರು ಭಾಗವಹಿಸಿ ಮಾಹಿತಿ ಪಡೆದರು. ನವೋದಯ ಸ್ವಸಹಾಯ ಗುಂಪುಗಳ ಮೇಲ್ವಿಚಾರಕ ಹರಿನಾಥ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿ ನೀಡಿದರು.

ನವೋದಯ ಸ್ವಸಹಾಯ ಗುಂಪುಗಳ ಕೋ-ಆರ್ಡಿನೇಟರ್‌ಗಳಾದ ಕೃಷ್ಣ ನಾಯ್ಕ್, ಸುಮಿತ್ರಾ, ಗೀತಾ ಶೆಟ್ಟಿ, ಸೊಸಾಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಉಪಸ್ಥಿತರಿದ್ದರು. ಸಹಾಯಕ ಪ್ರಧಾನ ವ್ಯವಸ್ಥಾಪ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!