ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ನೀರುಪಾಲು

ಕಾರ್ಕಳ: ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಠಾಣಾ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ನಡೆದಿದೆ.

ಶಿರ್ಲಾಲು ‌ನಿವಾಸಿಗಳಾದ ಹರೀಶ್ ಪೂಜಾರಿ (48) ಹಾಗೂ ಅವರ ಸಹೋದರಿ ಪುತ್ರ ರಿತೇಶ್ (18) ಎಂಬವರು ನೀರಿನಲ್ಲಿ ಮುಳಗಿ ಸಾವನ್ನಪ್ಪಿದ್ದವರು.

ಸ್ಥಳೀಯ ಶಿರ್ಲಾಲು ಗ್ರಾಮದ ಉಬ್ರೇಲು ಗುಂಡಿ ಕೆರೆಗೆ ಮೀನು ಹಿಡಿಯಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಮೀನು ಹಿಡಿಯುತ್ತಿದ ರಿತೇಶ್ ಮುಳುಗುವುದು ಕಂಡು ಅತನನ್ನು ರಕ್ಷಿಸಲು ಹೋದ ಹರೀಶ್ ಪೂಜಾರಿ ಅವರೂ ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ. ಅಜೆಕಾರು ಪೊಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!