ಕೋಟೆ ನಾಗರಿಕ ಸೇವಾ ಸಮಿತಿ: ಪ್ರತಿಭಾ ಪುರಸ್ಕಾರ – ಸನ್ಮಾನ

ಶಿರ್ವ: ಸಾಧಿಸುವ ಮನಸುಗಳಿಗೆ ಹುಟ್ಟೂರ ಸನ್ಮಾನ ಅತಿ ಮುಖ್ಯವಾಗಿರೋದು. ನಮ್ಮೂರಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ನಾವು ಗುರುತಿಸಿರುವುದು ಹೆಮ್ಮೆಯ ಸಂಗತಿ ಇದು ವಿದ್ಯಾರ್ಥಿಗಳಿಗೆ ಇನ್ನೊಂದಷ್ಟು ಸ್ಪೂರ್ತಿಯ ಜೊತೆಗೆ ಜವಾಬ್ದಾರಿಯನ್ನು ನೀಡುತ್ತದೆ ಎಂದು ಕಟಪಾಡಿಯ ಸೃಷ್ಟಿ ಫೌಂಡೇಶನ್ ಅಧ್ಯಕ್ಷರಾದ ಪ್ರಕಾಶ್ ಸುವರ್ಣ ಕಟಪಾಡಿ ಹೇಳಿದರು.

ಅವರು ಕೋಟೆ ನಾಗರಿಕ ಸೇವಾ ಸಮಿತಿ ವತಿಯಿಂದ ಕೋಟೆ ಸೌಜನ್ಯ ನಿಲಯದಲ್ಲಿ ಭಾನುವಾರ ನಡೆದ ಅತ್ಯಧಿಕ ಅಂಕ ಗಳಿಸಿದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಯೋಗೀಶ್ ವಿ.ಕೋಟ್ಯಾನ್ ಮಾತನಾಡಿ, ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ,ಗೌರವಿಸಿ, ಪ್ರೋತ್ಸಾಹ ನೀಡಿದ್ದಲ್ಲಿ ಮುಂದಿನ ಶೈಕ್ಷಣಿಕ ವ್ಯಾಸಂಗಕ್ಕೆ ಉತ್ತೇಜನ ನೀಡಿದಂತಾಗುತ್ತದೆ ಎಂದರು. 10ನೇ ತರಗತಿಯ ಪರೀಕ್ಷೆಯಲ್ಲಿ 90 ಶೇಕಡಕ್ಕಿಂತ ಹೆಚ್ಚು ಅಂಕಗಳಿಸಿದ ಮುನಿಶಾ ಆರ್ ಕೋಟ್ಯಾನ್, ಪೂರ್ವಿ ಜೆ ಸಾಲಿಯಾನ್, ಧನ್ಯಶ್ರೀ, ನವ್ಯ ಡಿ.ಜತ್ತನ್, ಧನುಷ್ ,ಲಿಖಿತ್ ಆರ್. ಜೆ ಜತ್ತನ್ ಇವರನ್ನು ಸನ್ಮಾನಿಸಲಾಯಿತು. ಕೋಟೆ ನಾಗರಿಕ ಸೇವಾ ಸಮಿತಿಯ ಅಧ್ಯಕ್ಷರಾದ ಕೃಷ್ಣ ಅಮೀನ್ ಕೋಟೆ , ಬೆಂಗಳೂರಿನ ಮೋರ್ಗೆನ್ ಸ್ಟಾನ್ಲಿ ಸಂಸ್ಥೆಯ ಉಪಾಧ್ಯಕ್ಷ ರೋಷನ್ ಪೂಜಾರಿ, ಪ್ರಸನ್ನ ಕೋಟೆ, ಸ್ಥಳೀಯರಾದ ಗೀತಾ ಬಿ ಶೆಟ್ಟಿ, ಸಂಜೀವ್ ಮೆಂಡನ್ ಉಪಸ್ಥಿತರಿದ್ದರು. ಕಟಪಾಡಿ ಸ್ವಸ್ತಿಕ್ ಕಲಾಸಂಘದ ಅಧ್ಯಕ್ಷರಾದ ರಮೇಶ್ ಕೋಟ್ಯಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಧೀರಜ್ ಬೆಳ್ಳಾರೆ ನಿರೂಪಿಸಿದರು. ಕಾರ್ತಿಕ್ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!