ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ರಘುಪತಿ ಭಟ್ ಅವರ ಪದವೀಧರರ ಸಂಪರ್ಕ ಕೇಂದ್ರ ಉದ್ಘಾಟಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಕರ್ನಾಟಕ ವಿಧಾನ ಪರಿಷತ್ ಚುನಾವಣೆ – 2024 ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ಅವರ ಶಿವಮೊಗ್ಗದ ಪದವೀಧರರ ಸಂಪರ್ಕ ಕೇಂದ್ರವನ್ನು ಇಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹೊಯ್ಸಳ ಕ್ರೆಡಿಟ್ ಕೊ – ಆಪರೇಟಿವ್ ಸೊಸೈಟಿ ಶಿವಮೊಗ್ಗ ಇದರ ಅಧ್ಯಕ್ಷರಾದ ಎಂ. ಶಂಕರ್, ಸದಸ್ಯರಾದ ಸೋಗಣ್ಣ ರಮೇಶ್, ಶಿವಮೊಗ್ಗ ನಗರಪಾಲಿಕೆ ಮಾಜಿ ಸದಸ್ಯರಾದ ವಿಶ್ವಾಸ್, ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ನಟರಾಜ್ ಭಾಗವತ್, ಸ್ಥಳೀಯ ಹಿರಿಯರಾದ ದೇವದಾಸ್ ನಾಯಕ್, ತಾಲೂಕು ವಿಶ್ವಕರ್ಮ ಸಮಾಜದ ಪ್ರಮುಖರಾದ ಅ.ಮಾ. ಪ್ರಕಾಶ್, ತಾಲ್ಲೂಕು ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷರಾದ ವೆಂಕಟೇಶ್ ರಾವ್ ಹಾಗೂ ಇತರ ಸಮಾಜಗಳ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!