ಮಂಡ್ಯ: ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ- ಮನೆಗಳಿಗೆ ನುಗ್ಗಿ ಬೆದರಿಕೆ!

ಮಂಡ್ಯ: ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡ ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.

ಮುಸ್ಲಿಂ ಯುವಕರ ಗುಂಪು ಅಭಿಲಾಷ್ ಮೇಲೆ ಹಲ್ಲೆ ನಡೆಸಿದ್ದು ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೆ ಗುಂಪು ಹಲ್ಲೆ ಮಾಡಿದೆ. ಅಷ್ಟೇ ಅಲ್ಲದೆ ಹಿಂದೂ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದು ಸದ್ಯ ಬೆಳ್ಳೂರಿನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.

ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಟಾಗಿದ್ದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮ ವಹಿಸುತ್ತಿದ್ದಾರೆ.

ಬೆಳ್ಳೂರಿನ ಸಂತೆ ಬೀದಿಯಲ್ಲಿ ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಅತಿ ವೇಗದಲ್ಲಿ ಕಾರು ಓಡಿಸಿಕೊಂಡು ಹೋಗಿದ್ದರು. ಇದನ್ನು ಅಭಿಲಾಷ್ ಹಾಗೂ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಅಲ್ಲದೆ ವೇಗವಾಗಿ ಕಾರು ಓಡಿಸದಂತೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು.

ಇದರಿಂದ ಆಕ್ರೋಶಗೊಂಡಿದ್ದ ಮುಸ್ಲಿಂ ಯುವಕರು ದೊಡ್ಡ ಸಂಖ್ಯೆಯಲ್ಲಿ ಗುಂಪು ಕಟ್ಟಿಕೊಂಡು ಬಂದು ಇಂದು ಅಭಿಲಾಷ್ ನನ್ನು ಟಾರ್ಗೆಟ್ ಮಾಡಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಬಳಿಕ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಿದ್ದು, ಇದರಿಂದ ಆಕ್ರೋಶಗೊಂಡಿ ರುವ ಜನರು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳು ವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!