ಕುಂದಾಪುರ: ಬ್ಯಾಟಿನಿಂದ ಹೊಡೆದು ಯುವಕನ ಕೊಲೆ ಯತ್ನ-ಪ್ರಕರಣ ದಾಖಲು

ಕುಂದಾಪುರ, ಜೂ.5: ರಿಕ್ಷಾ ಚಾಲಕರೊಬ್ಬರಿಗೆ ಬ್ಯಾಟ್ ನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿರುವ ಘಟನೆ ಜೂ.4ರಂದು ಸಂಜೆ ಹೆಮ್ಮಾಡಿ ಗ್ರಾಮದ ಸಂತೋಷ ನಗರದ ಕ್ರಾಸ್ ಬಳಿ ನಡೆದಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಹೆಮ್ಮಾಡಿ ಗ್ರಾಮದ ಹರೀಶ್ (34) ಎಂಬವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಟೋ ರಿಕ್ಷಾ ನಿಲ್ದಾಣದಲ್ಲಿ ಬಾಡಿಗೆಗೆ ಕಾಯುತ್ತಿದ್ದಾಗ ಹರೀಶ್‌ಗೆ ಕೃಷ್ಣ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕ್ರಿಕೆಟ್ ಬ್ಯಾಟ್‌ನಿಂದ ಕೊಲೆ ಮಾಡುವ ಉದ್ದೇಶದಿಂದ ತಲೆಯ ಮುಂಭಾಗಕ್ಕೆ ಹೊಡೆದಿರುವುದಾಗಿ ದೂರಲಾಗಿದೆ. ‌

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!