ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ- ಜು.7ರಂದು ಪೂರ್ವಭಾವಿ ಸಭೆ

ಕುಂದಾಪುರ: ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳುವ ಸಲುವಾಗಿ ಕುಂದಾಪುರದ ಬಿದ್ಕಲ್ ಕಟ್ಟೆ ಮೊಳಹಳ್ಳಿ ಸೇವಾ ಸಹಕಾರಿ ಬ್ಯಾಂಕ್ ಆಶ್ರಯದ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ಜು.07 ರ ಆದಿತ್ಯವಾರ ಬೆಳಗ್ಗೆ 9:30 ಗಂಟೆಗೆ ಸರಿಯಾಗಿ ಪೂರ್ವಭಾವಿ ಸಭೆಯನ್ನು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ಘಟಕ ಆಯೋಜಿಸಿದೆ.

ಈ ಭಾಗದ ಕನ್ನಡ ಅಭಿಮಾನಿಗಳು, ಸಾಹಿತ್ಯ ಸಂಸ್ಕೃತಿ ಮತ್ತು ಸಂಗೀತಾಸಕ್ತರು ಸಭೆಗೆ ಬಂದು ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಉಮೇಶ್ ಪುತ್ರನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!