ಜು.13: ಇಂದ್ರಾಣಿ ಶ್ರೀ ಆಂಜನೇಯ ದೇವರ ಗುಡಿ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ಉಡುಪಿ: ಇಂದ್ರಾಣಿ ಶ್ರೀಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಸನಿಹದಲ್ಲಿ ಪ್ರಕೃತಿಯ ರಮಣೀಯ ತಾಣದಲ್ಲಿರುವ ಶ್ರೀಆಂಜನೇಯ ದೇವರ ಗುಡಿಯ ಜೀರ್ಣೋದ್ಧಾರ ಕಾರ್ಯ ಆರಂಭಿಸುವ ಸಲುವಾಗಿ ಇಂದ್ರಾಣಿ ಶ್ರೀಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾ ಹೋಮ, ಆಂಜನೇಯ ದೇವರ ಗುಡಿಯಲ್ಲಿ ವಾಯುಸ್ತುತಿ ಯಾಗ ಮತ್ತು ಭಕ್ತರಿಂದ ಮುಷ್ಠಿ ಕಾಣಿಕೆ ಸಮರ್ಪಣೆ, ಸಾಮೂಹಿಕ ಪ್ರಾರ್ಥನೆಯೊಂದಿಗೆ ವೇದಮೂರ್ತಿ ಪುತ್ತೂರು ಶ್ರೀ ಶ್ರೀನಿವಾಸ ತಂತ್ರಿಗಳವರ ನೇತೃತ್ವದಲ್ಲಿ ದಿನಾಂಕ: ಜು.13 ಶನಿವಾರ ಬೆಳಗ್ಗೆ 9 ರಿಂದ ನೆರವೇರಲಿದೆ.

ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಇಂದ್ರಾಣಿ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮತ್ತು ಶ್ರೀ ಆಂಜನೇಯ ದೇವರ ಗುಡಿ ಜೀರ್ಣೋದ್ಧಾರ ಸಮಿತಿಯ ಪರವಾಗಿ ವಿನಂತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!