ಕುಂದಾಪುರ: ಗಂಡ ಹೆಂಡತಿ ಜಗಳ- ಹೊಳೆಗೆ ಹಾರಿದ ಛಾಯಾಗ್ರಾಹಕ

Oplus_131072

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆ ಕಾಳಾವರ ಜನತಾ ಕಾಲೋನಿ ನಿವಾಸಿ ಹರೀಶ್ ಬೋವಿ(42) ಎಂದು ತಿಳಿದು ಬಂದಿದೆ.

ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಇಬ್ಬರ ಮನಸ್ತಾಪವನ್ನು ಅಲ್ಲೇ ಸರಿಪಡಿಸಿದ್ದಾರೆ‌. ಬಳಿಕ ಠಾಣೆಯಿಂದ ಆಟೋದಲ್ಲಿ ಮನೆಗೆ ಹೋಗುತ್ತಿರುವಾಗ ಹೊಳೆ ಹತ್ತಿರ ನಿಲ್ಲಿಸಿ ಸೇತುವೆ ಮೇಲಿಂದ ನದಿಗೆ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ, ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಸುಂದರ್ ಮತ್ತು ಅಭಿಷೇಕ್ ಹಾದಿಮನೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಡ್ಲೂರು ನದಿಯಲ್ಲಿ ಹರೀಶ್ ಅವರ ಶವ ಹುಡುಕಾಟದಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!