ಕುಂದಾಪುರ: ಫ್ಯಾಕ್ಚರಿಯಲ್ಲಿ ಬಿದ್ದು ಅನುಮಾಸ್ಪದವಾಗಿ ಮೃತ್ಯು

ಕುಂದಾಪುರ, ಜು.18: ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸಂಶಯಾಸ್ಪದವಾಗಿ ಮೃತಪಟ್ಟ ಘಟನೆ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಶಂಕರನಾರಾಯಣದ ಚಂದ್ರ ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ನೆಲ್ಲಿಕಟ್ಟೆಯ ಸ್ವಾದಿಷ್ಟ ಚಕ್ಕುಲಿ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಜು.12ರಂದು ಬಿದ್ದು ಗಾಯಗೊಂಡು ಪ್ರಜ್ಞೆ ತಪ್ಪಿದ್ದರು. ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಜು.16ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇವರು ಬಿದ್ದ ಪರಿಣಾಮ ತಲೆ ಹಾಗೂ ಬೆನ್ನು ಮೂಳೆಗೆ ತೀವ್ರ ಪೆಟ್ಟಾಗಿರುವುದರಿಂದ ಮೃತಪಟ್ಟಿದ್ದು, ಅವರ ಸಾವಿನಲ್ಲಿ ಸಂಶಯವಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!