ಸಕಲೇಶಪುರ-ಶಿರಾಡಿ ಘಾಟ್‌ನಲ್ಲಿ ಎಲ್ಲ ವಾಹನಗಳ ಸಂಚಾರ ನಿಷೇಧ

Oplus_131072

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ-75ರ ಬೆಂಗಳೂರು-ಮಂಗಳೂರು ರಸ್ತೆಯ ಶಿರಾಡಿಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಜು.18ರಿಂದ ರಸ್ತೆ ದುರಸ್ತಿ ಕಾಮಗಾರಿ ಮುಗಿಯುವವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಸತ್ಯಭಾಮ ಸಿ. ಆದೇಶ ಹೊರಡಿಸಿದ್ದಾರೆ.

ಈ ಆದೇಶದಂತೆ ರಾಷ್ಟ್ರೀಯ ಹೆದ್ದಾರಿ-75ರ ಬೆಂಗಳೂರು-ಮಂಗಳೂರು ರಸ್ತೆಯ ಹಾಸನದಿಂದ ಮಾರನಹಳ್ಳಿವರೆಗಿನ ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಿಂದಾಗಿ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದಿದ್ದು, ಎಲ್ಲಾ ಬಗೆಯ ವಾಹನಗಳ ಸಂಚಾರವನ್ನು (ತುರ್ತು ಪರಿಸ್ಥಿತಿ ವಾಹನ ಹೊರತುಪಡಿಸಿ) ನಿಷೇಧಿಸಲಾಗಿದೆ.

ಮೈಸೂರು, ಬೆಂಗಳೂರಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್-ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!