ಕಾರು- ಬಸ್ ಅಪಘಾತ: ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

Oplus_131072

ದಾವಣಗೆರೆ: ಕಾರು ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಸವಳಂಗ ರಸ್ತೆಯಲ್ಲಿ ನಡೆದಿದೆ.

ಶಿಕಾರಿಪುರದ ಪುಷ್ಪ ಶಾಲೆ ಫಾ.ಆಂಥೋಣಿ(51) ಮೃತಪಟ್ಟವರು.

ಚಿನ್ನಿಕಟ್ಟೆಯ ಸವಳಂಗ ರಸ್ತೆಯಲ್ಲಿ ಮಂಗಳವಾರ, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ  ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆಂಥೋಣಿ ಸ್ಥಳದಲ್ಲಿಯೇ ಮೃತಪಟ್ಟರು.ಶಿವಮೊಗ್ಗ ಕ್ಯಾಥೋಲಿಕ್ ಕ್ರೈಸ್ತ ಧರ್ಮ ಕ್ಷೇತ್ರದ  ಫಾದರ್ ಆಂಥೋಣಿ ಪೀಟರ್ ಶಿಕಾರಿಪುರದಲ್ಲಿ ಧರ್ಮ ಗುರುಗಳಾಗಿದ್ದರು.

Leave a Reply

Your email address will not be published. Required fields are marked *

error: Content is protected !!