ಹಿರಿಯಡ್ಕ: ತೆಂಗಿನ ಮರ ಬಿದ್ದು ಮನೆ ಮತ್ತು ಎರಡು ರಿಕ್ಷಾಕ್ಕೆ ಹಾನಿ

Oplus_131072

ಉಡುಪಿ, ಜು.26: ಭಾರೀ ಸುಂಟರಗಾಳಿಗೆ ತೆಂಗಿನ ಮರವೊಂದು ಧರೆಗೆ ಉರುಳಿದ ಪರಿಣಾಮ ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಘಟನೆ ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ನಡೆದಿದೆ.

ಬಜೆಯ ಅಮ್ಮಣ್ಣಿ ಸೇರಿಗಾರ್ತಿ ಎಂಬವರ ಮನೆ ಸಮೀಪದ ತೆಂಗಿನ ಮರ ಬಿದ್ದ ಪರಿಣಾಮ ಮನೆ ಹಾನಿಯಾಗಿದ್ದು, ಮನೆ ಬಳಿ ನಿಲ್ಲಿಸಿದ ಅಮ್ಮಣಿ ಅವರ ಮಕ್ಕಳಾದ ಗಣಪತಿ ಸೇರಿಗಾರ ಹಾಗೂ ರವಿ ಸೇರಿಗಾರ ಎಂಬವರ ಅಟೋ ರಿಕ್ಷಾಗಳು ಸಂಪೂರ್ಣ ಜಖಂಗೊಂಡಿವೆ. ಇದರಿಂದ ಲಕ್ಷಾಂತರ ನಷ್ಟ ರೂ. ಉಂಟಾಗಿದೆ ಎಂದು ತಿಳಿದುಬಂದಿದೆ.

ಉದ್ಯಾವರದ ಸಂಪಿಗೆನಗರದಲ್ಲಿ ನಡುರಾತ್ರಿ ಬಂದ ಭಾರೀ ಗಾಳಿಗೆ ರಿಕ್ಷಾ ಚಾಲಕ ರವಿ ಮನೆಯ ಛಾವಣಿ ಹಾರಿಹೋಗಿದೆ. ಮಾತ್ರವಲ್ಲದೆ ಈ ಪರಿಸರದಲ್ಲಿ ಹಲವು ಮರಗಳು ಧರೆಗೆ ಉರುಳಿದೆ.

Leave a Reply

Your email address will not be published. Required fields are marked *

error: Content is protected !!