ಶೈಕ್ಷಣಿಕ ವರ್ಷದಲ್ಲಿಯೇ ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಿಸಲು ಕೃಷಿ ಸಚಿವರಿಗೆ ಮಂಜುನಾಥ್ ಭಂಡಾರಿ ಮನವಿ

Oplus_131072

ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿ ಶೈಕ್ಷಣಿಕ ವರ್ಷದಲ್ಲಿಯೇ ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಿಸಲು ವಿಶ್ವವಿದ್ಯಾಲಯದಿಂದ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಕೃಷಿ ಸಚಿವರಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮನವಿ ಸಲ್ಲಿಸಿದ್ದಾರೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ ಇದರಡಿಯಲ್ಲಿ ಬ್ರಹ್ಮಾವರದಲ್ಲಿನ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಮುಂದುವರೆಸಲು ಸರ್ಕಾರದಿಂದ ಆದೇಶ ಬಂದಿದ್ದರೂ ಇಲ್ಲಿಯವರೆಗೆ ಶಿವಮೊಗ್ಗ ವಿಶ್ವವಿದ್ಯಾನಿಲಯದಿಂದ ಅಧಿಸೂಚನೆ ಹೊರಡಿಸಿರುವುದಿಲ್ಲ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಇದರ ಆಧೀನದಲ್ಲಿರುವ ಕೃಷಿ ಡಿಪ್ಲೋಮಾ ಕಾಲೇಜು ಮಂಡ್ಯದಲ್ಲಿ ಈಗಾಗಲೇ ಕೋರ್ಸ್ ಪ್ರಾರಂಭಿಸಲು ಅಧಿಸೂಚನೆ ಹೊರಡಿಸಿದೆ.

ಅದರಂತೆ ಬ್ರಹ್ಮಾವರ ತಾಲ್ಲೂಕಿನಲ್ಲೂ ಕೃಷಿ ಡಿಪ್ಲೋಮಾ ಕಾಲೇಜ್‌ನ್ನು ಶೈಕ್ಷಣಿಕ ವರ್ಷದಲ್ಲಿಯೇ ಪ್ರಾರಂಭಿಸಲು ವಿವಿಗೆ ನಿರ್ದೇಶನ ನೀಡುವಂತೆ ಮಂಜುನಾಥ್ ಭಂಡಾರಿಯವರು ಕೃಷಿ‌ ಸಚಿವ ಎನ್ ಚಲುವರಾಯಸ್ವಾಮಿಯವರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!