ಮಣಿಪಾಲ: ಬೈಕ್ ಕಳವು ಪ್ರಕರಣದ ಆರೋಪಿಯ ಬಂಧನ

Oplus_131072

ಮಣಿಪಾಲ: ಆರು ತಿಂಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಮಣ್ಣಪಳ್ಳ ಬಳಿ ಬಂಧಿಸಿದ್ದಾರೆ.

ಬ್ರಹ್ಮಾವರ ಪುತ್ತೂರು ನಿವಾಸಿ ಪ್ರಕಾಶ್ ನಾಯಕ್ ಬಂಧಿತ ಆರೋಪಿ. ಈತನಿಂದ ಕಳವು ಮಾಡಿರುವ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿರುವಾಗ ಬೈಕಿನಲ್ಲಿ ಬಂದ ವ್ಯಕ್ತಿಯ ನಡುವಳಿಕೆಯ ಮೇಲೆ ಸಂಶಯಗೊಂಡು ತಡೆದು ನಿಲ್ಲಿಸಿದರು. ಬಳಿಕ ವಿಚಾರಣೆ ನಡೆಸಿದಾಗ ಆತನ ಕೈಯಲ್ಲಿದ್ದ ಬೈಕ್ ಕಳವು ಮಾಡಿರುವುದು ತಿಳಿದುಬಂದಿದೆ. ತಕ್ಷಣ ಆತನನ್ನು ವಶಕ್ಕೆ ಪಡೆದು ಬೈಕ್ ಸ್ವಾಧೀನ ಪಡಿಸಿಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕ ದೇವರಾಜ್ ಟಿ.ವಿ.,ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ, ಸಿಬ್ಬಂದಿಗಳಾದ ಇಮ್ರಾನ್, ಪ್ರಸನ್ನ ಕಾರ್ಯಾಚರಣೆಯಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!